ಅಂಬೇಡ್ಕರ್ ಜಯಂತಿ ಆಚರಣೆ
ದಿನಾಂಕ ೧೪.೪.೨೦೨೫ ರಂದು ಬೆಳಿಗ್ಗೆ ೮.೩೦ ಕ್ಕೆ ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧೩೪ ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನೆಯ ಮೂಲಕ ಪ್ರಾರಂಭಿಸಲಾಯಿತು. ಶಾಲಾ ಉಪಮುಖ್ಯೋಪಾಧ್ಯಾಯರಾದ ಲೀಯಾ ಡಿಸೋಜರವರು ನ್ಯಾಯ ಸಮಾನತೆ ಮತ್ತು ಸಂವಿಧಾನದ ಮಹತ್ವ ಮತ್ತು ಅಂಬೇಡ್ಕರ್ ಅವರ ಜೀವನಮೌಲ್ಯಗಳ ಬಗ್ಗೆ ಮಾತನಾಡಿದರು. ದೈನಂದಿನ ಜೀವನದಲ್ಲಿ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕುಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಎತ್ತಿ ಹಿಡಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಂತರ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು . ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.